ಕೇರಳದ ನಾಡ ಹಬ್ಬವಾದ ಓಣಂ ಆಚರಣೆಯನ್ನು ನಮ್ಮ ಶಾಲೆಯಲ್ಲಿ ತಾ. 05-09-2014 ನೇ ಶುಕ್ರವಾರದಂದು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಹೂವಿನ ರಂಗೋಲಿ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಶಾಲಾ ವಿದ್ಯಾರ್ಥಿ ಪವನ್ ಕುಮಾರ್ ಹಾಕಿದ ಮಾವೇಲಿ ವೇಷ ಎಲ್ಲರ ಗಮನ ಸೆಳೆಯಿತು. ಬಳಿಕ ಶಾಲಾ ವಿದ್ಯಾರ್ಥಿನಿಯರು ನಡೆಸಿಕೊಟ್ಟ ತಿರುವಾದಿರ ನೃತ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಮದ್ಯಾಹ್ನ ಹಬ್ಬದ ಪ್ರಯುಕ್ತ 'ಓಣಂ ಸದ್ಯ' ತಯಾರಿಸಲಾಗಿತ್ತು. ಮಕ್ಕಳು ಪಾಯಸದೂಟವನ್ನು ಬಹಳ ಸಂಭ್ರಮದಿಂದ ಸವಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಲಜಾಕ್ಷಿ ಎ, ಪಿ.ಟಿ.ಎ ಅಧ್ಯಕ್ಷ ಶ್ರೀ ಚಂದ್ರಶೇಖರ್, ಉಪಾಧ್ಯಕ್ಷೆ ಕಮರುನ್ನೀಸ, ಶಾಲಾ ಅಧ್ಯಾಪಿಕೆಯರಾದದ ಶ್ರೀಮತಿ ಗೀತಾ ಎ, ಕುಮಾರಿ ಭವ್ಯಶ್ರೀ ಯನ್, ಅಧ್ಯಾಪಕರಾದ ಅಬ್ದುಲ್ ಮಜೀದ್, ಶ್ರೀ ಜಯಪ್ರಶಾಂತ್ ಪಿ ಯವರು ಉಪಸ್ಥಿತರಿದ್ದರು.
Friday 5 September 2014
ಸಂಭ್ರಮದ ಓಣಂ ಆಚರಣೆ....
ಕೇರಳದ ನಾಡ ಹಬ್ಬವಾದ ಓಣಂ ಆಚರಣೆಯನ್ನು ನಮ್ಮ ಶಾಲೆಯಲ್ಲಿ ತಾ. 05-09-2014 ನೇ ಶುಕ್ರವಾರದಂದು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಹೂವಿನ ರಂಗೋಲಿ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಶಾಲಾ ವಿದ್ಯಾರ್ಥಿ ಪವನ್ ಕುಮಾರ್ ಹಾಕಿದ ಮಾವೇಲಿ ವೇಷ ಎಲ್ಲರ ಗಮನ ಸೆಳೆಯಿತು. ಬಳಿಕ ಶಾಲಾ ವಿದ್ಯಾರ್ಥಿನಿಯರು ನಡೆಸಿಕೊಟ್ಟ ತಿರುವಾದಿರ ನೃತ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಮದ್ಯಾಹ್ನ ಹಬ್ಬದ ಪ್ರಯುಕ್ತ 'ಓಣಂ ಸದ್ಯ' ತಯಾರಿಸಲಾಗಿತ್ತು. ಮಕ್ಕಳು ಪಾಯಸದೂಟವನ್ನು ಬಹಳ ಸಂಭ್ರಮದಿಂದ ಸವಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಲಜಾಕ್ಷಿ ಎ, ಪಿ.ಟಿ.ಎ ಅಧ್ಯಕ್ಷ ಶ್ರೀ ಚಂದ್ರಶೇಖರ್, ಉಪಾಧ್ಯಕ್ಷೆ ಕಮರುನ್ನೀಸ, ಶಾಲಾ ಅಧ್ಯಾಪಿಕೆಯರಾದದ ಶ್ರೀಮತಿ ಗೀತಾ ಎ, ಕುಮಾರಿ ಭವ್ಯಶ್ರೀ ಯನ್, ಅಧ್ಯಾಪಕರಾದ ಅಬ್ದುಲ್ ಮಜೀದ್, ಶ್ರೀ ಜಯಪ್ರಶಾಂತ್ ಪಿ ಯವರು ಉಪಸ್ಥಿತರಿದ್ದರು.
Subscribe to:
Post Comments (Atom)
No comments:
Post a Comment