2014-15 ನೇ ಸಾಲಿನ ನಾಲ್ಕನೇ ತರಗತಿ ಮಕ್ಕಳ ಬೀಲ್ಕೊಡುಗೆ ಕಾರ್ಯಕ್ರಮವು ತಾ. 30-03-2015 ನೇ ಸೋಮವಾರದಂದು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಉದ್ಯಾವರ ಬೋವಿ ವಿದ್ಯಾದಾಯಿನಿ ಸಂಘದ ಅಧ್ಯಕ್ಷ ಶ್ರೀ ಕೃಷ್ಣಪ್ಪ ಬೆಂಗರೆ, ಕೋಶಾಧಿಕಾರಿ ಶ್ರೀ ವಿಶ್ವನಾಥ್ ಸಿ ಉದ್ಯಾವರ್, ಪಿ.ಟಿ.ಎ ಅಧ್ಯಕ್ಷ ಶ್ರೀ ಚಂದ್ರಶೇಖರ್, ಶ್ರೀಮತಿ ಶಾಲಿನಿ ಕೆ ಬೆಂಗರೆ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಲಜಾಕ್ಷಿ ಎ ಉಪಸ್ಥಿತರಿದ್ದು ಮಕ್ಕಳಿಗೆ ಶುಭ ಹಾರೈಸಿದರು. ನಾಲ್ಕನೇ ತರಗತಿಯ ಎಲ್ಲಾ ಮಕ್ಕಳು ತಮ್ಮ ಶಾಲಾ ಜೀವನದ ಅನುಭವವನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಶಾಲಿನಿ ಕೃಷ್ಣಪ್ಪ ಬೆಂಗರೆ ದಂಪತಿ ನಾಲ್ಕನೇ ತರಗತಿಯ ಎಲ್ಲಾ ಮಕ್ಕಳಿಗೆ ಓದುವ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಎಲ್ಲರಿಗೂ ಲಘು ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.
No comments:
Post a Comment