....ನಮ್ಮ ಶಾಲಾ ಬ್ಲಾಗ್'ಗೆ ಸ್ವಾಗತ....

Monday 22 June 2015

2015-16 ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

      2015-16 ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಜರಗಿತು. ಕಾರ್ಯಕ್ರಮದಲ್ಲಿ ಕಳೆದ ಶೈಕ್ಶಣಿಕ ವರ್ಷದಲ್ಲಿ ಪಿ.ಟಿ.ಎ ಅಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರ್, ಉದ್ಯಾವರ ಬೋವಿ ವಿದ್ಯಾದಾಯಿನಿ ಸಂಘದ ಅಧ್ಯಕ್ಷ ಶ್ರೀ ಕೃಷ್ಣಪ್ಪ ಬೆಂಗರೆ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಲಜಾಕ್ಷಿ ಎ ವರದಿ ಮಂಡಿಸಿದರು. 2015-16 ನೇ ಸಾಲಿನ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಕಮಿಟಿ ರಚಿಸಲಾಯಿತು. ಅಧ್ಯಕ್ಷರಾಗಿ ಶ್ರೀ ಸದಾಶಿವ ಕಣ್ವತೀರ್ಥ, ಉಪಾಧ್ಯಕ್ಷೆಯಾಗಿ ಶ್ರೀಮತಿ ತಿರುಮಲೇಶ್ವರಿ ಭಟ್ ಅವಿರೋಧವಾಗಿ ಆಯ್ಕೆಯಾದರು. ಬಳಿಕ ನಡೆದ ಮಾತೃ ಸಂಘದ ಸಭೆಯಲ್ಲಿ ಈ ವರ್ಷದ ನೂತನ ಅಧ್ಯಕ್ಷೆಯಾಗಿ ಶ್ರೀಮತಿ ಕಮರುನ್ನೀಸ ತೂಮಿನಾಡು, ಉಪಾಧ್ಯಕ್ಷೆಯಾಗಿ ಶ್ರೀಮತಿ ಮಮತಾ ಕುಚ್ಚಿಕ್ಕಾಡು ಅವಿರೋಧವಾಗಿ ಆಯ್ಕೆಯಾದರು.



No comments:

Post a Comment