ಭಾರತದ 11ನೇ ರಾಷ್ಟ್ರಪತಿ ಭಾರತ ರತ್ನ, ಪದ್ಮ ಭೂಷಣ, ಪದ್ಮ ವಿಭೂಷಣ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ನಮ್ಮನ್ನಗಲಿದ್ದಾರೆ. ಅಗಲಿದ ಚೇತನಕ್ಕೆ ಪುಷ್ಪಾರ್ಚನೆಯ ಮೂಲಕ ಶಾಲೆಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಲಜಾಕ್ಷಿ ಎ, ಅರಬಿಕ್ ಅಧ್ಯಾಪಕ ಅಬ್ದುಲ್ ಮಜೀದ್, ಅಧ್ಯಾಪಕ ಜಯಪ್ರಶಾಂತ್ ಪಿ ರವರು ಅಬ್ದುಲ್ ಕಲಾಂ ರವರ ಜೀವನಗಾಥೆಯನ್ನು ಮಕ್ಕಳ ಮುಂದೆ ತೆರೆದಿಟ್ಟು ನಮನವನ್ನು ಸಲ್ಲಿಸಿದರು. ಸಹ ಶಿಕ್ಷಕಿಯರಾದ ಶ್ರೀಮತಿ ಭವ್ಯಶ್ರೀ ಯನ್, ಶ್ರೀಮತಿ ಗೀತಾ ಎ ಕಲಾಂ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು.
No comments:
Post a Comment