Sunday, 30 August 2015
Thursday, 27 August 2015
Friday, 21 August 2015
ಸಂಭ್ರಮದ ಓಣಂ ಆಚರಣೆ
ನಮ್ಮ ಶಾಲೆಯಲ್ಲಿ ಓಣಂ ಆಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಆ ಪ್ರಯುಕ್ತ ಹೂವಿನ ರಂಗೋಲಿಯನ್ನು ರಚಿಸಲಾಯಿತು. ಶಾಲಾ ವಿದ್ಯಾರ್ಥಿ ಸೃತನ್ ಕುಮಾರ್ ಹಾಕಿದ ಮಾವೇಲಿ ವೇಷ ಎಲ್ಲರ ಗಮನ ಸೆಳೆಯಿತು. ಮಧ್ಯಾಹ್ನ ಬಗೆ ಬಗೆಯ ಪದಾರ್ಥ, ಪಾಯಸದ 'ಓಣಂ ಸದ್ಯ'ವನ್ನು ಎಲ್ಲರೂ ಸವಿದರು. ಶಾಲಾ ಮಕ್ಕಳಿಗೆ ಹಾಗೂ ಅಧ್ಯಾಪಕರಿಗೆ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಶಾಲಾ ಪಿ.ಟಿ.ಎ ಸಹಕರಿಸಿದರು.
Saturday, 15 August 2015
69 ನೇ ಸ್ವಾತಂತ್ರ್ಯೋತ್ಸವ ಆಚರಣೆ
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಲಾ ಪ್ರಬಂಧಕ ಶ್ರೀ ವಿಶ್ವನಾಥ್ ಪಿ ಉದ್ಯಾವರ್ ವಹಿಸಿದರು. ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಶ್ರೀ ಕೃಷ್ಣಪ್ಪ ಬೆಂಗರೆ, ಕಾರ್ಯದರ್ಶಿ ಶ್ರೀ ವಿಶ್ವನಾಥ್ ಸಿ ಉದ್ಯಾವರ್, ಪಿ.ಟಿ.ಎ ಅಧ್ಯಕ್ಷ ಶ್ರೀ ಸದಾಶಿವ ಕಣ್ವತೀರ್ಥ ಹಾಗೂ ಹಿತೈಷಿ ಶ್ರೀ ಶ್ರೀನಿವಾಸ್ ಭಟ್ ಕಣ್ವತೀರ್ಥ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಕೋರಿದರು. ಶ್ರೀ ಆನಂದ ಎಸ್ ಉದ್ಯಾವರ್ ಹಾಗೂ ಶ್ರೀ ಉದಯ್ ಉದ್ಯಾವರ್ ಮಾತನಾಡಿ ಶುಭ ಕೋರಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಲಜಾಕ್ಷಿ ಎ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಗೀತಾ ಎ ವಂದಿಸಿದರು. ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಿ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಎಲ್ಲರಿಗೂ ಸಿಹಿತಿಂಡಿ ವಿತರಿಸಲಾಯಿತು.
Subscribe to:
Posts (Atom)