....ನಮ್ಮ ಶಾಲಾ ಬ್ಲಾಗ್'ಗೆ ಸ್ವಾಗತ....

Sunday 30 August 2015

ರಕ್ಷಾ ಬಂಧನದ ಶುಭಾಶಯಗಳು

ಎಲ್ಲರಿಗೂ ರಕ್ಷಾಬಂಧನದ ಹಾರ್ದಿಕ ಶುಭಾಶಯಗಳು

Thursday 27 August 2015

ಓಣಂ ಶುಭಾಶಯ

ನಾಡಿನ ಸಮಸ್ತ ಜನತೆಗೆ ಓಣಂ ಹಬ್ಬದ ಹಾರ್ದಿಕ ಶುಭಾಶಯಗಳು

Friday 21 August 2015

ಸಂಭ್ರಮದ ಓಣಂ ಆಚರಣೆ

         ನಮ್ಮ ಶಾಲೆಯಲ್ಲಿ ಓಣಂ ಆಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಆ ಪ್ರಯುಕ್ತ ಹೂವಿನ ರಂಗೋಲಿಯನ್ನು ರಚಿಸಲಾಯಿತು. ಶಾಲಾ ವಿದ್ಯಾರ್ಥಿ ಸೃತನ್ ಕುಮಾರ್ ಹಾಕಿದ ಮಾವೇಲಿ ವೇಷ ಎಲ್ಲರ ಗಮನ ಸೆಳೆಯಿತು. ಮಧ್ಯಾಹ್ನ ಬಗೆ ಬಗೆಯ ಪದಾರ್ಥ, ಪಾಯಸದ 'ಓಣಂ ಸದ್ಯ'ವನ್ನು ಎಲ್ಲರೂ ಸವಿದರು. ಶಾಲಾ ಮಕ್ಕಳಿಗೆ ಹಾಗೂ ಅಧ್ಯಾಪಕರಿಗೆ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಶಾಲಾ ಪಿ.ಟಿ.ಎ ಸಹಕರಿಸಿದರು.
























Saturday 15 August 2015

69 ನೇ ಸ್ವಾತಂತ್ರ್ಯೋತ್ಸವ ಆಚರಣೆ

      ನಮ್ಮ ಶಾಲೆಯಲ್ಲಿ 69 ನೇ ಸ್ವಾತಂತ್ರ್ಯೋತ್ಸವವನ್ನು ಬಹಳ ಸಡಗರದಿಂದ ಆಚರಿಸಲಾಯಿತು. ಆ ಪ್ರಯುಕ್ತ ವಿವಿಧ ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಿಯರನ್ನೊಳಗೊಂಡ ಆಕರ್ಷಕ ಮೆರವಣಿಗೆಯನ್ನು ನಡೆಸಲಾಯಿತು. ಬಳಿಕ ನಡೆದ ಧ್ವಜಾರೋಹಣವನ್ನು ಶಾಲಾ ಪಿ.ಟಿ.ಎ ಅಧ್ಯಕ್ಷ ಶ್ರೀ ಸದಾಶಿವ ಕಣ್ವತೀರ್ಥ ನೆರವೇರಿಸಿದರು. ಈ ಸಂದರ್ಭದಲ್ಲಿ ವಾರ್ಡ್ ಸದಸ್ಯ ಶ್ರೀ ಪವನ್ ಕುಮಾರ್ ಅಂಜರೆ ಶುಭ ಕೋರಿದರು.
      ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಲಾ ಪ್ರಬಂಧಕ ಶ್ರೀ ವಿಶ್ವನಾಥ್ ಪಿ ಉದ್ಯಾವರ್ ವಹಿಸಿದರು. ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಶ್ರೀ ಕೃಷ್ಣಪ್ಪ ಬೆಂಗರೆ, ಕಾರ್ಯದರ್ಶಿ ಶ್ರೀ ವಿಶ್ವನಾಥ್ ಸಿ ಉದ್ಯಾವರ್, ಪಿ.ಟಿ.ಎ ಅಧ್ಯಕ್ಷ ಶ್ರೀ ಸದಾಶಿವ ಕಣ್ವತೀರ್ಥ ಹಾಗೂ ಹಿತೈಷಿ ಶ್ರೀ ಶ್ರೀನಿವಾಸ್ ಭಟ್ ಕಣ್ವತೀರ್ಥ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಕೋರಿದರು. ಶ್ರೀ ಆನಂದ ಎಸ್ ಉದ್ಯಾವರ್ ಹಾಗೂ ಶ್ರೀ ಉದಯ್ ಉದ್ಯಾವರ್ ಮಾತನಾಡಿ ಶುಭ ಕೋರಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಲಜಾಕ್ಷಿ ಎ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಗೀತಾ ಎ ವಂದಿಸಿದರು. ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಿ ಕಾರ್ಯಕ್ರಮ ನಿರೂಪಿಸಿದರು.
        ಬಳಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಎಲ್ಲರಿಗೂ ಸಿಹಿತಿಂಡಿ ವಿತರಿಸಲಾಯಿತು.