ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತ ಪುಸ್ತಕ, ಸಮವಸ್ತ್ರ ಹಾಗೂ ಕಲಿಕೋಪಕರಣಗಳ ವಿತರಣಾ ಕಾರ್ಯಕ್ರಮ ಶಾಲಾ ಆಡಳಿತ ಸಮಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಯಾವರ ಬೋವಿ ವಿದ್ಯಾದಾಯಿನಿ ಸಂಘ ಮುಂಬೈಯವರು ನೀಡಿದ ಪುಸ್ತಕ ಹಾಗೂ ಕಲಿಕೋಪಕರಣಗಳನ್ನು ಶ್ರೀ ಕೃಷ್ಣಪ್ಪ ಬೆಂಗರೆ ವಿತರಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯೆ ಶ್ರೀಮತಿ ಶಶಿಕಲಾ, ಶಾಲಾ ಪಿ.ಟಿ.ಎ ಅಧ್ಯಕ್ಷ ಶ್ರೀ ಸದಾಶಿವ ಕಣ್ವತೀರ್ಥ, ಬೋವಿ ಮಹಿಳಾ ಸಂಘದ ಉಪಾಧ್ಯಕ್ಷೆ ಶ್ರೀಮತಿ ಶಾಲಿನಿ ಕೆ ಬೆಂಗರೆ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಲಜಾಕ್ಷಿ ಎ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಭವ್ಯಶ್ರೀ ಯನ್ ವಂದಿಸಿದರು. ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಿ ನಿರೂಪಿಸಿದರು.
No comments:
Post a Comment